(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…