(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…