(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…