(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…