(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…