(ಕಡತ ಚಿತ್ರ )
ಸುಬ್ರಹ್ಮಣ್ಯ: ಮಂಗಳೂರು ಬೆಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಹಳಿಯ ಮೇಲೆ ಮಣ್ಣು ಕುಸಿತಗೊಂಡು ಸೋಮವಾರ ಬೆಳಗ್ಗೆ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಿದ್ದು ಬಳಿಕ ಸಂಚಾರ ಸುಗಮಗೊಂಡಿದೆ. ಶಿರಾಡಿ ಘಾಟಿ ಪ್ರದೇಶದಲ್ಲಿ ಪ್ರತೀ ವರ್ಷವೂ ಮಣ್ಣು ಹಳಿಯ ಮೇಲೆ ಕುಸಿತವಾಗಿ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಬಾರಿಯೂ ಪುನರಾವರ್ತನೆಯಾಗಿದೆ.
ಸೋಮವಾರ ಬೆಳಗ್ಗೆ ರೈಲು ಹಳಿಯ ಮೇಲೆ ಮಣ್ಣು ಕುಸಿತವಾದ ಮಾಹಿತಿ ಲಭ್ಯವಾದ ತಕ್ಷಣವೇ ತೆರವು ಕಾರ್ಯಾಚರಣೆ ನಡೆದಿದೆ. ಹೀಗಾಗಿ ಯಾವುದೇ ಸಮಸ್ಯೆಯಾಗಲಿಲ್ಲ. ಗೂಡ್ಸ್ ರೈಲು ಸಂಚಾರದಲ್ಲಿ ಕೊಂಚ ವ್ಯತ್ಯಯ ಉಂಟಾಯಿತು.
ಕಳೆದ ವಾರ ಶಿರಾಡಿ ಘಾಟ್ ಮೂಲಕ ರೈಲು ಓಡಾಟಕ್ಕೆ ಮಳೆಗಾಲ ಸುರಕ್ಷಿತವೇ ಎಂದು ರೈಲ್ವೇ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು ಇದೀಗ ಕಳೆದ ಎರಡು ವರ್ಷಗಳಿಂದ ಶಿರಾಡಿ ಘಾಟ್ ರೈಲು ಹಳಿಯ ಕಡೆಗೆ ವಿಶೇಷ ಗಮನ ನೀಡಲಾಗುತ್ತಿದ್ದು ಮಳೆಗಾಲ ಹೆಚ್ಚುವರಿಯಾಗಿ ಸುರಕ್ಷತೆಯ ಕಡೆಗೆ ಗಮನನೀಡಲಾಗುತ್ತಿದೆ. ಮಣ್ಣು ಕುಸಿತದ ಸಂದರ್ಭ ತಕ್ಷಣವೇ ಕಾರ್ಯಾಚರಣೆ ಮಾಡಲು ವಿಶೇಷ ತಂಡ ರಚನೆಯಾಗಿದೆ.
ಇದೀಗ ಶಿರಾಡಿ ಘಾಟ್ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದು ಮತ್ತೆ ಕುಸಿತದ ಭೀತಿ ಇದೆ.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…