ಸುಂದರ ಪರಿಸರದೊಂದಿಗೆ ಸುಂದರ ಬದುಕು ಸಾಧ್ಯ- ಧರ್ಮಸ್ಥಳದಲ್ಲಿ ಶ್ರದ್ಧಾ ಅಮಿತ್

January 1, 2020
7:58 PM

ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ ಹಾಗೂ ನೆಮ್ಮದಿಯ ಬದುಕು ಸಾಧ್ಯ ಎಂದು ಧರ್ಮಸ್ಥಳದ ಶ್ರದ್ಧಾ ಅಮಿತ್ ಹೇಳಿದರು.

Advertisement

ಉಜಿರೆಯಲ್ಲಿ ಎಸ್.ಡಿ.ಎಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಅವರು, ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಸ್ವಚ್ಛತಾ ಅಭಿಯಾನದಲ್ಲಿ ಹಳೆ ಬಟ್ಟೆಗಳಿಂದ ತಯಾರಿಸಿದ ಚೀಲಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನದಿ ನೀರನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸದಂತೆ ಹಿರಿಯರು ಮಕ್ಕಳಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಭವಿಷ್ಯದಲ್ಲಿ ನಾವು ತಾಂತ್ರಿಕ ಬೆಳವಣಿಗೆ, ಜಾಗತೀಕರಣ ಮತ್ತು ಪರಿಸರ ಮಾಲಿನ್ಯ ಎಂಬ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸ್ವಚ್ಛ ಪರಿಸರದೊಂದಿಗೆ ಪ್ಲಾಸ್ಟಿಕ್ ಬಳಕೆ ರಹಿತ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳನ್ನು ರೂಪಿಸಲಾಗುವುದು. ಈಗಾಗಲೆ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಯಶಸ್ವಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಉತ್ತಮ ವಾತಾವರಣ ರೂಪಿಸಲು ಎಲ್ಲರೂ ಪಣತೊಡಬೇಕು ಎಂದು ಸಲಹೆ ನೀಡಿದರು. ಧರ್ಮಸ್ಥಳದ  ಮಾನ್ಯ, ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ದಿನೇಶ್‍ ಚೌಟ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group