ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ ಹಾಗೂ ನೆಮ್ಮದಿಯ ಬದುಕು ಸಾಧ್ಯ ಎಂದು ಧರ್ಮಸ್ಥಳದ ಶ್ರದ್ಧಾ ಅಮಿತ್ ಹೇಳಿದರು.
ಉಜಿರೆಯಲ್ಲಿ ಎಸ್.ಡಿ.ಎಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಅವರು, ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಸ್ವಚ್ಛತಾ ಅಭಿಯಾನದಲ್ಲಿ ಹಳೆ ಬಟ್ಟೆಗಳಿಂದ ತಯಾರಿಸಿದ ಚೀಲಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನದಿ ನೀರನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸದಂತೆ ಹಿರಿಯರು ಮಕ್ಕಳಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಭವಿಷ್ಯದಲ್ಲಿ ನಾವು ತಾಂತ್ರಿಕ ಬೆಳವಣಿಗೆ, ಜಾಗತೀಕರಣ ಮತ್ತು ಪರಿಸರ ಮಾಲಿನ್ಯ ಎಂಬ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸ್ವಚ್ಛ ಪರಿಸರದೊಂದಿಗೆ ಪ್ಲಾಸ್ಟಿಕ್ ಬಳಕೆ ರಹಿತ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳನ್ನು ರೂಪಿಸಲಾಗುವುದು. ಈಗಾಗಲೆ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಯಶಸ್ವಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಉತ್ತಮ ವಾತಾವರಣ ರೂಪಿಸಲು ಎಲ್ಲರೂ ಪಣತೊಡಬೇಕು ಎಂದು ಸಲಹೆ ನೀಡಿದರು. ಧರ್ಮಸ್ಥಳದ ಮಾನ್ಯ, ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ದಿನೇಶ್ ಚೌಟ ಉಪಸ್ಥಿತರಿದ್ದರು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…