Advertisement
ಕಾರ್ಯಕ್ರಮಗಳು

ಸುಂದರ ಪರಿಸರದೊಂದಿಗೆ ಸುಂದರ ಬದುಕು ಸಾಧ್ಯ- ಧರ್ಮಸ್ಥಳದಲ್ಲಿ ಶ್ರದ್ಧಾ ಅಮಿತ್

Share

ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ ಹಾಗೂ ನೆಮ್ಮದಿಯ ಬದುಕು ಸಾಧ್ಯ ಎಂದು ಧರ್ಮಸ್ಥಳದ ಶ್ರದ್ಧಾ ಅಮಿತ್ ಹೇಳಿದರು.

ಉಜಿರೆಯಲ್ಲಿ ಎಸ್.ಡಿ.ಎಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಅವರು, ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಸ್ವಚ್ಛತಾ ಅಭಿಯಾನದಲ್ಲಿ ಹಳೆ ಬಟ್ಟೆಗಳಿಂದ ತಯಾರಿಸಿದ ಚೀಲಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನದಿ ನೀರನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸದಂತೆ ಹಿರಿಯರು ಮಕ್ಕಳಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.

ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಭವಿಷ್ಯದಲ್ಲಿ ನಾವು ತಾಂತ್ರಿಕ ಬೆಳವಣಿಗೆ, ಜಾಗತೀಕರಣ ಮತ್ತು ಪರಿಸರ ಮಾಲಿನ್ಯ ಎಂಬ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸ್ವಚ್ಛ ಪರಿಸರದೊಂದಿಗೆ ಪ್ಲಾಸ್ಟಿಕ್ ಬಳಕೆ ರಹಿತ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳನ್ನು ರೂಪಿಸಲಾಗುವುದು. ಈಗಾಗಲೆ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಯಶಸ್ವಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.

ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಉತ್ತಮ ವಾತಾವರಣ ರೂಪಿಸಲು ಎಲ್ಲರೂ ಪಣತೊಡಬೇಕು ಎಂದು ಸಲಹೆ ನೀಡಿದರು. ಧರ್ಮಸ್ಥಳದ  ಮಾನ್ಯ, ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ದಿನೇಶ್‍ ಚೌಟ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago