ಉಜಿರೆ: ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದಾಗ ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಕಸ ಸೃಷ್ಟಿ ಮಾಡುವುದು ಮತ್ತು ಬಿಸಾಡುವುದು ನಮ್ಮ ಸಂಸ್ಕೃತಿ ಅಲ್ಲ. ಸುಂದರ ಪರಿಸರದೊಂದಿಗೆ ಸುಂದರ ಹಾಗೂ ನೆಮ್ಮದಿಯ ಬದುಕು ಸಾಧ್ಯ ಎಂದು ಧರ್ಮಸ್ಥಳದ ಶ್ರದ್ಧಾ ಅಮಿತ್ ಹೇಳಿದರು.
ಉಜಿರೆಯಲ್ಲಿ ಎಸ್.ಡಿ.ಎಂ.ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬುಧವಾರ ಅವರು, ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಸ್ವಚ್ಛತಾ ಅಭಿಯಾನದಲ್ಲಿ ಹಳೆ ಬಟ್ಟೆಗಳಿಂದ ತಯಾರಿಸಿದ ಚೀಲಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನದಿ ನೀರನ್ನು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಕಲುಷಿತಗೊಳಿಸದಂತೆ ಹಿರಿಯರು ಮಕ್ಕಳಲ್ಲಿ ಅರಿವು, ಜಾಗೃತಿ ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಮಾತನಾಡಿ, ಭವಿಷ್ಯದಲ್ಲಿ ನಾವು ತಾಂತ್ರಿಕ ಬೆಳವಣಿಗೆ, ಜಾಗತೀಕರಣ ಮತ್ತು ಪರಿಸರ ಮಾಲಿನ್ಯ ಎಂಬ ದೊಡ್ಡ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸ್ವಚ್ಛ ಪರಿಸರದೊಂದಿಗೆ ಪ್ಲಾಸ್ಟಿಕ್ ಬಳಕೆ ರಹಿತ ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳನ್ನು ರೂಪಿಸಲಾಗುವುದು. ಈಗಾಗಲೆ ಪ್ಲಾಸ್ಟಿಕ್ ನಿರ್ಮೂಲನೆ ಬಗ್ಗೆ ಯಶಸ್ವಿ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.
ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್. ಜನಾರ್ದನ್ ಮಾತನಾಡಿ, ಪರಿಸರವನ್ನು ಪ್ರೀತಿಸಿ, ಉತ್ತಮ ವಾತಾವರಣ ರೂಪಿಸಲು ಎಲ್ಲರೂ ಪಣತೊಡಬೇಕು ಎಂದು ಸಲಹೆ ನೀಡಿದರು. ಧರ್ಮಸ್ಥಳದ ಮಾನ್ಯ, ಎಸ್.ಡಿ.ಎಂ.ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಸತೀಶ್ಚಂದ್ರ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಎನ್. ದಿನೇಶ್ ಚೌಟ ಉಪಸ್ಥಿತರಿದ್ದರು.
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…