ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
ರಾಜ್ಯದ ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಿವು ಕೇಂದ್ರಗಳು ಜ್ಞಾನದ ಕೇಂದ್ರಗಳಾಗಿದ್ದು, ಸ್ಪರ್ಧಾತ್ಮಕ…
ಜಲಾನಯನ ಯಾತ್ರೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ…
15 ರಾಜ್ಯಗಳಲ್ಲಿ 2 ಸಾವಿರದ 590 ಮೊಬೈಲ್ ಸಂಪರ್ಕರಹಿತ ಗ್ರಾಮಗಳನ್ನು ಗುರುತಿಸಲಾಗಿದೆ. ಈ…
ಗದಗ ಜಿಲ್ಲೆಯ ಮುಂಡರಗಿ ಮತ್ತು ಶಿರಹಟ್ಟಿ ತಾಲೂಕಿನ ಸುಮಾರು 33 ಸಾವಿರ ಹೆಕ್ಟೇರ್…
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…