ಸುಳ್ಯ: ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ “ಏರ್ಬಸ್ ಪ್ಲೈಯುವರ್ ಐಡಿಯಾಸ್ ” ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್ ” ತಂಡವು ಗೆದ್ದು ರೂ. 20 ಲಕ್ಷ ಬಹುಮಾನವನ್ನು ಗಳಿಸಿದೆ. ಸುಜಯ್ ನಾರಾಯಣ್ ಅವರು ಪ್ರಸ್ತುತ ನೆದರ್ ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ.ಸುಬ್ರಹ್ಮಣ್ಯ ಭಟ್ ಮತ್ತು ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…