ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿಲ್ಲ. ಅನಾರೋಗ್ಯದಿಂದಾಗಿ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರಿಗೆ ಜ್ವರ, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಸಿಜಿ ಮಾಡಿರುವ ವೈದ್ಯರು ಹೃದಯ ಸಂಬಂಧಿ ಕಾಯಿಲೆಗೂ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರಾಗಬೇಕಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಸುಮಾರು 20 ದಿನದಿಂದ ಸತತ ವಿಚಾರಣೆಯಿಂದಾಗಿ ಡಿ.ಕೆ.ಶಿವಕುಮಾರ್ ನಿತ್ರಾಣರಾಗಿದ್ದಾರೆ. ಹಾಗಾಗಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವುದು ಕಷ್ಟವಾಗಿದೆ. ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಬೇಕಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel