ಸುಳ್ಯ: ಭಕ್ತಿರಸದ ಮೂಲಕ ನಮ್ಮೊಳಗಿರುವ ಅರಿಷಡ್ವರ್ಗಗಳನ್ನು ಜಯಿಸಿ ಆ ಭಗವಂತನಲ್ಲಿ ಶರಣಾಗತಿ ಹೊಂದಲು ಇರುವ ಅತಿ ಸರಳ ಮಾರ್ಗ ಸಂಗೀತ. ಸಮಾಜದ ಉನ್ನತಿಗೆ, ಸದ್ಭಾವನೆ ಮತ್ತು ಸಾಮರಸ್ಯದಲ್ಲಿ ಬದುಕಲು ಸಂಗೀತ ವಿದ್ಯೆ ಅನಿವಾರ್ಯ ಎಂದು ಖ್ಯಾತ ಮೃದಂಗ ವಿದ್ವಾನ್ ಸುನಾದ ಕಲಾ ಶಾಲಾ ನಿರ್ದೇಶಕ ಕಾಂಚನ ಎ ಈಶ್ವರ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ತನ್ನ ಮೂಲ ಉದ್ದೇಶವನ್ನು ಮರೆತು ಸಂಗೀತವನ್ನು ಅರ್ಜಿಸುತ್ತಿರುವುದು ಅನುಭವಕ್ಕೆ ಬರುತ್ತಿದೆ. ಸಂಗೀತವನ್ನು ಎಲ್ಲರೂ ಅರ್ಥೈಸಿ ಅನುಸರಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಜಯಶ್ರೀ ಈಶ್ವರ ಭಟ್, ನಾರಾಯಣ ಕೇಳತ್ತಾಯ, ಪ್ರಕಾಶ್ ಹಾಸನಡ್ಕ, ಪೂರ್ಣಿಮಾ, ವಿದುಷಿ ವಾಣಿ ಪ್ರಸಾದ್, ಸೌಜನ್ಯ ಪ್ರಶಾಂತ್, ವಿದುಷಿ ಶಿಲ್ಪಾ, ಮಹಾಬಲ ಬಿರ್ಮುಕಜೆ, ವಿದ್ವಾನ್ ಶ್ಯಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಸುನಾದ ಸಂಗೀತ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…