Advertisement
ಕಲೆ-ಸಂಸ್ಕೃತಿ

ಸುನಾದ ಶಾಲೆಯ ವಾರ್ಷಿಕ ಸಂಗೀತೋತ್ಸವ

Share

ಸುಳ್ಯ: ಭಕ್ತಿರಸದ ಮೂಲಕ ನಮ್ಮೊಳಗಿರುವ ಅರಿಷಡ್ವರ್ಗಗಳನ್ನು ಜಯಿಸಿ ಆ ಭಗವಂತನಲ್ಲಿ ಶರಣಾಗತಿ ಹೊಂದಲು ಇರುವ ಅತಿ ಸರಳ ಮಾರ್ಗ ಸಂಗೀತ. ಸಮಾಜದ ಉನ್ನತಿಗೆ, ಸದ್ಭಾವನೆ ಮತ್ತು ಸಾಮರಸ್ಯದಲ್ಲಿ ಬದುಕಲು ಸಂಗೀತ ವಿದ್ಯೆ ಅನಿವಾರ್ಯ ಎಂದು ಖ್ಯಾತ ಮೃದಂಗ ವಿದ್ವಾನ್ ಸುನಾದ ಕಲಾ ಶಾಲಾ ನಿರ್ದೇಶಕ ಕಾಂಚನ ಎ ಈಶ್ವರ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ತನ್ನ ಮೂಲ ಉದ್ದೇಶವನ್ನು ಮರೆತು ಸಂಗೀತವನ್ನು ಅರ್ಜಿಸುತ್ತಿರುವುದು ಅನುಭವಕ್ಕೆ ಬರುತ್ತಿದೆ. ಸಂಗೀತವನ್ನು ಎಲ್ಲರೂ ಅರ್ಥೈಸಿ ಅನುಸರಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಜಯಶ್ರೀ ಈಶ್ವರ ಭಟ್, ನಾರಾಯಣ ಕೇಳತ್ತಾಯ, ಪ್ರಕಾಶ್ ಹಾಸನಡ್ಕ, ಪೂರ್ಣಿಮಾ, ವಿದುಷಿ ವಾಣಿ ಪ್ರಸಾದ್, ಸೌಜನ್ಯ ಪ್ರಶಾಂತ್, ವಿದುಷಿ ಶಿಲ್ಪಾ, ಮಹಾಬಲ ಬಿರ್ಮುಕಜೆ, ವಿದ್ವಾನ್ ಶ್ಯಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಸುನಾದ ಸಂಗೀತ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

2 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

3 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

14 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

14 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

18 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago