ಸುಳ್ಯ: ಭಕ್ತಿರಸದ ಮೂಲಕ ನಮ್ಮೊಳಗಿರುವ ಅರಿಷಡ್ವರ್ಗಗಳನ್ನು ಜಯಿಸಿ ಆ ಭಗವಂತನಲ್ಲಿ ಶರಣಾಗತಿ ಹೊಂದಲು ಇರುವ ಅತಿ ಸರಳ ಮಾರ್ಗ ಸಂಗೀತ. ಸಮಾಜದ ಉನ್ನತಿಗೆ, ಸದ್ಭಾವನೆ ಮತ್ತು ಸಾಮರಸ್ಯದಲ್ಲಿ ಬದುಕಲು ಸಂಗೀತ ವಿದ್ಯೆ ಅನಿವಾರ್ಯ ಎಂದು ಖ್ಯಾತ ಮೃದಂಗ ವಿದ್ವಾನ್ ಸುನಾದ ಕಲಾ ಶಾಲಾ ನಿರ್ದೇಶಕ ಕಾಂಚನ ಎ ಈಶ್ವರ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ಸುನಾದ ಸಂಗೀತ ಕಲಾ ಶಾಲೆಯ ಸುಳ್ಯ ಶಾಖೆಯ ವಾರ್ಷಿಕ ಸಂಗೀತೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ತನ್ನ ಮೂಲ ಉದ್ದೇಶವನ್ನು ಮರೆತು ಸಂಗೀತವನ್ನು ಅರ್ಜಿಸುತ್ತಿರುವುದು ಅನುಭವಕ್ಕೆ ಬರುತ್ತಿದೆ. ಸಂಗೀತವನ್ನು ಎಲ್ಲರೂ ಅರ್ಥೈಸಿ ಅನುಸರಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಜಯಶ್ರೀ ಈಶ್ವರ ಭಟ್, ನಾರಾಯಣ ಕೇಳತ್ತಾಯ, ಪ್ರಕಾಶ್ ಹಾಸನಡ್ಕ, ಪೂರ್ಣಿಮಾ, ವಿದುಷಿ ವಾಣಿ ಪ್ರಸಾದ್, ಸೌಜನ್ಯ ಪ್ರಶಾಂತ್, ವಿದುಷಿ ಶಿಲ್ಪಾ, ಮಹಾಬಲ ಬಿರ್ಮುಕಜೆ, ವಿದ್ವಾನ್ ಶ್ಯಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಬಳಿಕ ಸುನಾದ ಸಂಗೀತ ವಿದ್ಯಾರ್ಥಿಗಳಿಂದ ಶಾಸ್ತ್ರೀಯ ಸಂಗೀತ ಗಾಯನ ಕಾರ್ಯಕ್ರಮ ನಡೆಯಿತು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…