ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.
ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…