ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.
ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.
ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…