Advertisement
ಸುದ್ದಿಗಳು

ಸುಬ್ರಹ್ಮಣ್ಯ:ಕೆಎಸ್‍ಎಸ್ ಕಾಲೇಜಿನಲ್ಲಿ ಜ್ಞಾನ ಯಾತ್ರೆ ಕಾರ್ಯಕ್ರಮ

Share

ಸುಬ್ರಹ್ಮಣ್ಯ:ಉತ್ತುಂಗದ ಶಿಖರದಲ್ಲಿ ಇರುವವರದು ಒಂದು ದಿನದ ಪರಿಶ್ರಮವಲ್ಲ. ಕಠಿಣ ಅಭ್ಯಾಸ ಮತ್ತು ನಿರಂತರ ಶ್ರಮಗಳಿಂದ ಅವರು ಈ ಸಾಧನೆಯನ್ನು ಮಾಡಿರುತ್ತಾರೆ. ಇದಕ್ಕೆ ಬೇಕಿರುವುದು ಸ್ಪೂರ್ತಿ. ಸ್ಪೂರ್ತಿ ದಾಯಕ ಧಾರಣೆಗಳ ವಿಚಾರಗಳ ಅಳವಡಿಕೆ ಇಂದಿನ ಅಗತ್ಯ ಎಂದು ಬೆಂಗಳೂರು ಹಲಸೂರು ಶ್ರೀ ರಾಮಕೃಷ್ಣ ಆಶ್ರಮದ ಮಹಾದೇವ ಹೇಳಿದರು.

ಸುಬ್ರಹ್ಮಣ್ಯ ಕೆಎಸ್‍ಎಸ್ ಕಾಲೇಜು ಮತ್ತು ಶ್ರೀ ರಾಮಕೃಷ್ಣ ಮಿಷನ್ ನೇತೃತ್ವದಲ್ಲಿ ಕೆಎಸ್‍ಎಸ್ ಕಾಲೇಜಿನಲ್ಲಿ ಗುರುವಾರ ನಡೆದ ಜ್ಞಾನ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯಶಸ್ವಿನ ಸಾಧನೆಗೆ ಕಠಿಣ ಅಭ್ಯಾಸ, ಶ್ರಮದ ಅವಶ್ಯಕತೆ ಇದ್ದು ಅದಕ್ಕೆ ಏಕಾಗ್ರತೆ ಹೊಂದುವುದು ತೀರಾ ಅವಶ್ಯಕ ಎಂದರು.

ಕಾಲೇಜು ಪ್ರಾಂಶುಪಾಲ ಪ್ರೊ.ಉದಯಕುಮಾರ್ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರ ಹೊಮ್ಮಲು ಧ್ಯಾನವೂ ಅಗತ್ಯ ಸಾಧನ ಎಂದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ.ರಾಮಪ್ರಸಾದ್ ಸ್ವಾಗತಿಸಿ ವಂದಿಸಿದರು. ಭೂಮಿಕ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

3 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

7 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 day ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago