ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…