ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…