ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…