ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ ಭುವನೇಶ್ ಕೈಕಂಬ ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳು ಜೊತೆಗೂಡಿ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಿದ ವನಮಹೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಗಳಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಹಾವಿದ್ಯಾಲಯದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಮೋಹನ್ ದಾಸ್ ರೈ ಅವರು ತ್ಯಾಜ್ಯ ಸಂಸ್ಕರಿಸುವ ಕೊಳವೆಯ ಬಗ್ಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿ ಕರಣೀಮಠ್ ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿದ್ದ್ರರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ವಹಿಸಿದ್ದರು.
ವೇದಿಕೆಯಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ರಮಾನಾಥ್, ಶಿವಪ್ರಸಾದ್ ಹಾಗೂ ಯೂತ್ ರೆಸ್ಕ್ರಾಸ್ ಅಧಿಕಾರಿಗಳಾದ ಮಧುರಾ ಉಪಸ್ಥಿತರಿದ್ದರು.
ಪ್ರಾಂಶುಪಾಲರಾದ ಪ್ರೋ. ಉದಯಕುಮಾರ್ ಕೆ ಸ್ವಾಗತಿಸಿ, ಎನ್.ಎಸ್.ಎಸ್ ಯೋಜನಾಧಿಕಾರಿ ಶಿವಪ್ರಸಾದ್ ವಂದಿಸಿದರು. ಲೋಹಿತ್ ಎಂ ಕಾರ್ಯಕ್ರಮ ನಿರೂಪಿಸಿದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…