ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಹಿತರಕ್ಷಣಾ ಸಮಿತಿ ಸಭೆ ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ಉಡುಪಿನಲ್ಲಿ ನಡೆದ ಮಾತುಕತೆಯ ಬಗ್ಗೆ ಭಕ್ತರಿಗೆ ಮಾಹಿತಿ ನಿಡಲಾಯಿತು. ಇದೇ ಸಂದರ್ಭ ಭಕ್ತರ ಸಲಹೆಗಳನ್ನೂ ಸ್ವೀಕರಿಸಲಾಯಿತು.
ಸಭೆಯಲ್ಲಿ 3 ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಯಿತು , ದೇವಸ್ಥಾನದ ಗಣಪತಿ ಗುಡಿ ಮೊದಲಿದ್ದ ಜಾಗದಲ್ಲೇ ನಿರ್ಮಾಣ ಹಾಗೂ ಸುಬ್ರಹ್ಮಣ್ಯ ಮಠ ಎಂಬ ಹೆಸರು ಹಾಗೂ ಸರ್ಪಸಂಸ್ಕಾರ ಸೇವೆಯ ಬಗ್ಗೆ ಮೊದಲಿದ್ದ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಸಂದರ್ಭ ಆತ್ಮೀಯವಾಗಿ ಸ್ವಾಗತಿಸಿ ಸಂಧಾನ ಸಭೆಯಲ್ಲಿ ತೊಡಗಿಸಕೊಳ್ಳಲು ನಿರ್ಧರಿಸಲಾಯಿತು.
ಇತರ ವಿಷಯಗಳಲ್ಲಿ ರಾಜಿ ಮಾಡಿಕೊಂಡರೂ 3 ಪ್ರಮುಖ ಅಂಶಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ನಿರ್ಧರಿಸಲಾಯಿತು.
ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ನಂಬಿಕೆ ಇಲ್ಲ ಎಂದು ನಿನ್ನೆ ಉಡುಪಿಯಲ್ಲಿ ವಿಹಿಂಪ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿರುವುದು ಚರ್ಚೆಗೆ ಕಾರಣವಾಯಿತು.
ಸಭೆಯಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಹಾಗೂ ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಬಾಲಕೃಷ್ಣ ರೈ , ಶಿವರಾಮ ರೈ ಮೊದಲಾದವರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…