ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಹಿತರಕ್ಷಣಾ ಸಮಿತಿ ಸಭೆ ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ಉಡುಪಿನಲ್ಲಿ ನಡೆದ ಮಾತುಕತೆಯ ಬಗ್ಗೆ ಭಕ್ತರಿಗೆ ಮಾಹಿತಿ ನಿಡಲಾಯಿತು. ಇದೇ ಸಂದರ್ಭ ಭಕ್ತರ ಸಲಹೆಗಳನ್ನೂ ಸ್ವೀಕರಿಸಲಾಯಿತು.
ಸಭೆಯಲ್ಲಿ 3 ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಯಿತು , ದೇವಸ್ಥಾನದ ಗಣಪತಿ ಗುಡಿ ಮೊದಲಿದ್ದ ಜಾಗದಲ್ಲೇ ನಿರ್ಮಾಣ ಹಾಗೂ ಸುಬ್ರಹ್ಮಣ್ಯ ಮಠ ಎಂಬ ಹೆಸರು ಹಾಗೂ ಸರ್ಪಸಂಸ್ಕಾರ ಸೇವೆಯ ಬಗ್ಗೆ ಮೊದಲಿದ್ದ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಸಂದರ್ಭ ಆತ್ಮೀಯವಾಗಿ ಸ್ವಾಗತಿಸಿ ಸಂಧಾನ ಸಭೆಯಲ್ಲಿ ತೊಡಗಿಸಕೊಳ್ಳಲು ನಿರ್ಧರಿಸಲಾಯಿತು.
ಇತರ ವಿಷಯಗಳಲ್ಲಿ ರಾಜಿ ಮಾಡಿಕೊಂಡರೂ 3 ಪ್ರಮುಖ ಅಂಶಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ನಿರ್ಧರಿಸಲಾಯಿತು.
ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ನಂಬಿಕೆ ಇಲ್ಲ ಎಂದು ನಿನ್ನೆ ಉಡುಪಿಯಲ್ಲಿ ವಿಹಿಂಪ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿರುವುದು ಚರ್ಚೆಗೆ ಕಾರಣವಾಯಿತು.
ಸಭೆಯಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಹಾಗೂ ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಬಾಲಕೃಷ್ಣ ರೈ , ಶಿವರಾಮ ರೈ ಮೊದಲಾದವರು ಉಪಸ್ಥಿತರಿದ್ದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…