ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಹಿತರಕ್ಷಣಾ ಸಮಿತಿ ಸಭೆ ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ಉಡುಪಿನಲ್ಲಿ ನಡೆದ ಮಾತುಕತೆಯ ಬಗ್ಗೆ ಭಕ್ತರಿಗೆ ಮಾಹಿತಿ ನಿಡಲಾಯಿತು. ಇದೇ ಸಂದರ್ಭ ಭಕ್ತರ ಸಲಹೆಗಳನ್ನೂ ಸ್ವೀಕರಿಸಲಾಯಿತು.
ಸಭೆಯಲ್ಲಿ 3 ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಯಿತು , ದೇವಸ್ಥಾನದ ಗಣಪತಿ ಗುಡಿ ಮೊದಲಿದ್ದ ಜಾಗದಲ್ಲೇ ನಿರ್ಮಾಣ ಹಾಗೂ ಸುಬ್ರಹ್ಮಣ್ಯ ಮಠ ಎಂಬ ಹೆಸರು ಹಾಗೂ ಸರ್ಪಸಂಸ್ಕಾರ ಸೇವೆಯ ಬಗ್ಗೆ ಮೊದಲಿದ್ದ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಸಂದರ್ಭ ಆತ್ಮೀಯವಾಗಿ ಸ್ವಾಗತಿಸಿ ಸಂಧಾನ ಸಭೆಯಲ್ಲಿ ತೊಡಗಿಸಕೊಳ್ಳಲು ನಿರ್ಧರಿಸಲಾಯಿತು.
ಇತರ ವಿಷಯಗಳಲ್ಲಿ ರಾಜಿ ಮಾಡಿಕೊಂಡರೂ 3 ಪ್ರಮುಖ ಅಂಶಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ನಿರ್ಧರಿಸಲಾಯಿತು.
ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ನಂಬಿಕೆ ಇಲ್ಲ ಎಂದು ನಿನ್ನೆ ಉಡುಪಿಯಲ್ಲಿ ವಿಹಿಂಪ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿರುವುದು ಚರ್ಚೆಗೆ ಕಾರಣವಾಯಿತು.
ಸಭೆಯಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಹಾಗೂ ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಬಾಲಕೃಷ್ಣ ರೈ , ಶಿವರಾಮ ರೈ ಮೊದಲಾದವರು ಉಪಸ್ಥಿತರಿದ್ದರು.
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…