ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಹಿತರಕ್ಷಣಾ ಸಮಿತಿ ಸಭೆ ಶುಕ್ರವಾರ ನಡೆಯಿತು. ಈ ಸಭೆಯಲ್ಲಿ ಉಡುಪಿನಲ್ಲಿ ನಡೆದ ಮಾತುಕತೆಯ ಬಗ್ಗೆ ಭಕ್ತರಿಗೆ ಮಾಹಿತಿ ನಿಡಲಾಯಿತು. ಇದೇ ಸಂದರ್ಭ ಭಕ್ತರ ಸಲಹೆಗಳನ್ನೂ ಸ್ವೀಕರಿಸಲಾಯಿತು.
ಸಭೆಯಲ್ಲಿ 3 ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಯಿತು , ದೇವಸ್ಥಾನದ ಗಣಪತಿ ಗುಡಿ ಮೊದಲಿದ್ದ ಜಾಗದಲ್ಲೇ ನಿರ್ಮಾಣ ಹಾಗೂ ಸುಬ್ರಹ್ಮಣ್ಯ ಮಠ ಎಂಬ ಹೆಸರು ಹಾಗೂ ಸರ್ಪಸಂಸ್ಕಾರ ಸೇವೆಯ ಬಗ್ಗೆ ಮೊದಲಿದ್ದ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಪೇಜಾವರ ಶ್ರೀಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಸಂದರ್ಭ ಆತ್ಮೀಯವಾಗಿ ಸ್ವಾಗತಿಸಿ ಸಂಧಾನ ಸಭೆಯಲ್ಲಿ ತೊಡಗಿಸಕೊಳ್ಳಲು ನಿರ್ಧರಿಸಲಾಯಿತು.
ಇತರ ವಿಷಯಗಳಲ್ಲಿ ರಾಜಿ ಮಾಡಿಕೊಂಡರೂ 3 ಪ್ರಮುಖ ಅಂಶಗಳಲ್ಲಿ ಯಾವುದೇ ರಾಜಿ ಇಲ್ಲ ಎಂದು ನಿರ್ಧರಿಸಲಾಯಿತು.
ಇದೇ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ನಂಬಿಕೆ ಇಲ್ಲ ಎಂದು ನಿನ್ನೆ ಉಡುಪಿಯಲ್ಲಿ ವಿಹಿಂಪ ಅಧ್ಯಕ್ಷ ಎಂ ಬಿ ಪುರಾಣಿಕ್ ಹೇಳಿರುವುದು ಚರ್ಚೆಗೆ ಕಾರಣವಾಯಿತು.
ಸಭೆಯಲ್ಲಿ ಕುಕ್ಕೆ ಭಕ್ತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಹೇಶ್ ಕುಮಾರ್ ಕರಿಕಳ ಹಾಗೂ ಕಿಶೋರ್ ಶಿರಾಡಿ, ಮೋನಪ್ಪ ಮಾನಾಡು, ಬಾಲಕೃಷ್ಣ ರೈ , ಶಿವರಾಮ ರೈ ಮೊದಲಾದವರು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…