Advertisement
ಧಾರ್ಮಿಕ

ಸುಬ್ರಹ್ಮಣ್ಯದಲ್ಲಿ ನರಸಿಂಹ ಜಯಂತಿ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ

Share

ಸುಬ್ರಹ್ಮಣ್ಯ: ಸಮಾಜಕ್ಕೆ ಬೇಕಾದ ಒಳ್ಳೆಯ ಆಡಳಿತ ಸೂತ್ರ ಕೊಟ್ಟ ನರಸಿಂಹ 6 ಸಾವಿರ ಕೋಟಿ ವರ್ಷ ಸುದೀರ್ಘ ಮಾರ್ಗದರ್ಶನ  ಮಾಡಿದ. ಆದರೆ ಇಂದು 5 ವರ್ಷ ಸರಿಯಾಗಿ ಅಧಿಕಾರ ನಡೆಸಲು ಬರುವುದಿಲ್ಲ.  ಇದಕ್ಕೆ ಧರ್ಮದ ಅರಿಬಿನ ಕೊರತೆಯೇ ಕಾರಣ ಎಂದು ಮೈಸೂರಿನ ವಿದ್ವಾನ್ ಬೆ.ನಾ. ವಿಜಯೀಂದ್ರ ಆಚಾರ್ಯ ಹೇಳಿದರು.

Advertisement
Advertisement

ಅವರು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇದರ ಶ್ರೀ ನರಸಿಂಹ ಜಯಂತೀ ಮಹೋತ್ಸವದ ಅಂಗವಾಗಿ ಶುಕ್ರವಾರ ಮಠದಲ್ಲಿ ನಡೆದ ಶ್ರೀಮದಾನಂದತೀರ್ಥ ತತ್ತ್ವದರ್ಶಿನೀ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಆಶೀರ್ಚನ ನೀಡಿದ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಯತಿಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಶ್ರೀ ಮಠವು ಕೇವಲ ಆಧ್ಯಾತ್ಮಿಕ ಕ್ಷೇತ್ರದ ಕಡೆಗೆ ಮಾತ್ರ ಒತ್ತು ನೀಡುತಿಲ್ಲ. ಸಂಶೋಧನ ಕೇಂದ್ರವನ್ನು ಹುಟ್ಟು ಹಾಕುವ ಮೂಲಕ ಸಂಶೋಧನಾ ಕೇತ್ರಕ್ಕೂ ಕೊಡುಗೆ ನೀಡುತ್ತಿದೆ. ಧಾರ್ಮಿಕ ಕ್ಷೇತ್ರದ ಹೊರತಾಗಿಯೂ ಮಠ ಸೇವೆ ನೀಡುತ್ತಿದೆ ಎಂದು  ಹೇಳಿದರು.

ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಶ್ರೀಗಳು ಸನ್ಮಾನಿಸಿ ಗೌರವಿಸಿದರು.

ಪಶುಸಂಗೋಪನ ಇಲಾಖೆಯ ಡಾ. ದೇವಿಪ್ರಸಾದ್ ಕಾನತ್ತೂರು, ಮುಖ್ಯ ಶಿಕ್ಷಕ ಕೃಷ್ಣಶರ್ಮ, ಉದ್ಯಮಿ ರವಿಕಕ್ಕೆಪದವು, ಎಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿನಿ, ಕೃಪಾ ಕೆ.ಆರ್, ಹಾಗೂ ಸಾಧನೆಗೈದ ಅನಂತ ಎಂ ಭಟ್, ಹವ್ಯಾ, ಸುದರ್ಶನ, ಪೂಜಾಜ, ಪುನೀತಾ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಠದ ದಿವಾನರಾದ ಸುದರ್ಶನ ಜೋಯಿಸ, ಕಲಾವಿದ ಯಜ್ಞೇಶ್ ಆಚಾರ್ಯ, ಮಠದ ಪುರೋಹಿತರು, ಭಕ್ತರು ಉಪಸ್ಥಿತರಿದ್ದರು.

ಬೆಂಗಳೂರು ವಿದ್ಯಾಪೀಠದ ಕಿರಣ ಆಚಾರ್ಯ, ಗೋಪಾಲಕೃಷ್ಣ ಪರ್ವತಮುಖಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

20 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

20 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

2 days ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

3 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

3 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

3 days ago