Advertisement
ಧಾರ್ಮಿಕ

ಸುಬ್ರಹ್ಮಣ್ಯದಲ್ಲಿ ನರಸಿಂಹ ಜಯಂತಿ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ

Share

ಸುಬ್ರಹ್ಮಣ್ಯ: ಸಮಾಜಕ್ಕೆ ಬೇಕಾದ ಒಳ್ಳೆಯ ಆಡಳಿತ ಸೂತ್ರ ಕೊಟ್ಟ ನರಸಿಂಹ 6 ಸಾವಿರ ಕೋಟಿ ವರ್ಷ ಸುದೀರ್ಘ ಮಾರ್ಗದರ್ಶನ  ಮಾಡಿದ. ಆದರೆ ಇಂದು 5 ವರ್ಷ ಸರಿಯಾಗಿ ಅಧಿಕಾರ ನಡೆಸಲು ಬರುವುದಿಲ್ಲ.  ಇದಕ್ಕೆ ಧರ್ಮದ ಅರಿಬಿನ ಕೊರತೆಯೇ ಕಾರಣ ಎಂದು ಮೈಸೂರಿನ ವಿದ್ವಾನ್ ಬೆ.ನಾ. ವಿಜಯೀಂದ್ರ ಆಚಾರ್ಯ ಹೇಳಿದರು.

ಅವರು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇದರ ಶ್ರೀ ನರಸಿಂಹ ಜಯಂತೀ ಮಹೋತ್ಸವದ ಅಂಗವಾಗಿ ಶುಕ್ರವಾರ ಮಠದಲ್ಲಿ ನಡೆದ ಶ್ರೀಮದಾನಂದತೀರ್ಥ ತತ್ತ್ವದರ್ಶಿನೀ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಆಶೀರ್ಚನ ನೀಡಿದ ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ಯತಿಗಳಾದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳು ಶ್ರೀ ಮಠವು ಕೇವಲ ಆಧ್ಯಾತ್ಮಿಕ ಕ್ಷೇತ್ರದ ಕಡೆಗೆ ಮಾತ್ರ ಒತ್ತು ನೀಡುತಿಲ್ಲ. ಸಂಶೋಧನ ಕೇಂದ್ರವನ್ನು ಹುಟ್ಟು ಹಾಕುವ ಮೂಲಕ ಸಂಶೋಧನಾ ಕೇತ್ರಕ್ಕೂ ಕೊಡುಗೆ ನೀಡುತ್ತಿದೆ. ಧಾರ್ಮಿಕ ಕ್ಷೇತ್ರದ ಹೊರತಾಗಿಯೂ ಮಠ ಸೇವೆ ನೀಡುತ್ತಿದೆ ಎಂದು  ಹೇಳಿದರು.

ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಶ್ರೀಗಳು ಸನ್ಮಾನಿಸಿ ಗೌರವಿಸಿದರು.

ಪಶುಸಂಗೋಪನ ಇಲಾಖೆಯ ಡಾ. ದೇವಿಪ್ರಸಾದ್ ಕಾನತ್ತೂರು, ಮುಖ್ಯ ಶಿಕ್ಷಕ ಕೃಷ್ಣಶರ್ಮ, ಉದ್ಯಮಿ ರವಿಕಕ್ಕೆಪದವು, ಎಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿನಿ, ಕೃಪಾ ಕೆ.ಆರ್, ಹಾಗೂ ಸಾಧನೆಗೈದ ಅನಂತ ಎಂ ಭಟ್, ಹವ್ಯಾ, ಸುದರ್ಶನ, ಪೂಜಾಜ, ಪುನೀತಾ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಠದ ದಿವಾನರಾದ ಸುದರ್ಶನ ಜೋಯಿಸ, ಕಲಾವಿದ ಯಜ್ಞೇಶ್ ಆಚಾರ್ಯ, ಮಠದ ಪುರೋಹಿತರು, ಭಕ್ತರು ಉಪಸ್ಥಿತರಿದ್ದರು.

ಬೆಂಗಳೂರು ವಿದ್ಯಾಪೀಠದ ಕಿರಣ ಆಚಾರ್ಯ, ಗೋಪಾಲಕೃಷ್ಣ ಪರ್ವತಮುಖಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

53 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

60 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago