Advertisement
ಕೃಷಿ

ಸುಬ್ರಹ್ಮಣ್ಯದಲ್ಲಿ ಭತ್ತದ ನಾಟಿಗಾಗಿ ಗದ್ದೆಗಿಳಿದ ವಿದ್ಯಾರ್ಥಿಗಳು

Share

ಸುಬ್ರಹ್ಮಣ್ಯ: ಗದ್ದೆಯಲ್ಲಿ  ನಾಟಿಗಾಗಿ ಸುಬ್ರಹ್ಮಣ್ಯದ ವಿದ್ಯಾರ್ಥಿಗಳಿ ಗದ್ದೆಗೆ ಇಳಿದರು. ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಹಾಗೂ ಬೇಸಾಯ ಪದ್ಧತಿ ಕುರಿತು ಮಾಹಿತಿ ಕಾರ್ಯಕ್ರಮ ನಡೆದರೆ,  ಸುಬ್ರಹ್ಮಣ್ಯ ಎಸ್‍ಎಸ್‍ಪಿಯು ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ಭತ್ತದ ನಾಟಿಗಾಗಿ ಗದ್ದೆಗೆ ಇಳಿದಿದ್ದರು.

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಹಾಗೂ ಬೇಸಾಯ ಪದ್ಧತಿ ಕುರಿತು ಮಾಹಿತಿ ಕಾರ್ಯಕ್ರಮವು  ನಡೆಯಿತು.
ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ರಾಮಣ್ಣ ಮಲೆಕುಡಿಯ ಅವರ ಭತ್ತದ ಗದ್ದೆಯಲ್ಲಿ ಮಕ್ಕಳು ಭತ್ತ ಬೇಸಾಯ ಕುರಿತು ನಾಟಿ ಮಾಡುವ ಮೂಲಕ ತಿಳಿದುಕೊಂಡರು. ಅಕ್ಕಿ ಬೆಳೆಯೋದು ಹೇಗೆ ? ನಮ್ಮ ಹಿರಿಯ ರೈತರು ಏನೆಲ್ಲ ಕಷ್ಟ ಪಡುತ್ತಿದ್ದರು. ಮೊದಲಾದ ವಿಷಯಗಳ ಕುರಿತು ಶಾಲಾ ಶಿಕ್ಷಕರು ತಿಳಿಸಿಕೊಟ್ಟರು. ಮಕ್ಕಳು ಕೆಸರು ತುಂಬಿದ ಗದ್ದೆಯಲ್ಲಿ ಭತ್ತದ ತೆನೆಗಳನ್ನು ಹಿಡಿದು ನಾಟಿ ಮಾಡಿದರು. ಕೆಸೆರಿನಲ್ಲಿ ಮಿಂದೆದ್ದು ಸಂಭ್ರಮ ಪಟ್ಟರು.
ಈ ಸಂದರ್ಭ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಚಂದ್ರಶೇಖರ್ ನಾಯರ್, ಮುಖ್ಯ ಶಿಕ್ಷಕಿ ವಿದ್ಯಾರತ್ನ, ಸಮಾಜ ಸೇವಕ ರವಿಕಕ್ಕೆಪದವು, ಶಿಕ್ಷಕರಾದ ದಿನಕರ, ಕಾರ್ತಿಕೆ, ಸುವರ್ಣ, ಯೋಗನಾಥ್, ಜಮೀನು ಒಡೆಯ ರಾಮಣ್ಣ ಪರ್ವತಮುಖಿ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement

 

ಸುಬ್ರಹ್ಮಣ್ಯ ಎಸ್‍ಎಸ್‍ಪಿಯು ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ಭತ್ತದ ನಾಟಿಗಾಗಿ ಗದ್ದೆಗೆ ಇಳಿದಿದ್ದರು. ಪರ್ವತಮುಖಿ ರಾಮಣ್ಣ ಮಲೆಕುಡಿಯ ಅವರ ಭತ್ತದ ಗದ್ದೆಯಲ್ಲಿ  ಕೆಲಸ ಮಾಡಿದ ವಿದ್ಯಾರ್ಥಿಗಳು ಎನ್ ಎಸ್ ಎಸ್  ಘಟಕದ ಮುಖ್ಯಸ್ಥರೊಂದಿಗೆ ತೆರಳಿದ ವಿದ್ಯಾರ್ಥಿಗಳು ಭತ್ತದ ಗದ್ದೆಗಿಳಿದು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಹದಗೊಳಿಸಿದ ಗದ್ದೆಯಲ್ಲಿ ಭತ್ತದ ಸಸಿಗಳನ್ನು ನೆಟ್ಟರು. ಭತ್ತದ ಬೆಳೆ ಕ್ಲಿಷ್ಟ ಎಂದು ಕೈ ಬಿಟ್ಟಿರುವ ರೈತರು ನಾಚುವಂತೆ ನಾಟಿ ಮಾಡಿದರು.
ವಿವಿಧ ಗುಂಪುಗಳಾಗಿ ಮಾಡಿಕೊಂಡು ಸಸಿ ಮಡಿಗಳಿಗೆ ಇಳಿದ ಶಿಕ್ಷಕರು, ಮಕ್ಕಳು ಸಸಿಗಳನ್ನು ನೆಟ್ಟು ಮಂದಹಾಸ ಬೀರಿದರು. ಮಕ್ಕಳು ಕೃಷಿ ಮಾಡುವುದನ್ನು ರಸ್ತೆ ಬದಿ ತೆರಳುತ್ತಿದ್ದ ಸಾರ್ವಜನಿಕರು, ಪ್ರಯಾಣಿಕರು ಕುತೂಹಲದಿಂದ ಬಂದು ವೀಕ್ಷಿಸಿದರು. ಕಾಲೇಜು ಪ್ರಾಂಶುಪಾಲೆ ಸಾವಿತ್ರಿ ಕೆ, ಘಟಕ ಮುಖ್ಯಸ್ಥ ಉಪನ್ಯಾಸಕ ಸೋಮಶೇಖರ, ರತ್ನಾಕರ ಎಸ್ , ಕೃಷಿ ಜಮೀನಿನ ಒಡೆಯ ರಾಮಣ್ಣ, ಮೋನಪ್ಪ ಮಾನಾಡು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

34 minutes ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

57 minutes ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

9 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

10 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

11 hours ago

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…

11 hours ago