ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಬದಿ ಖಾಸಗಿ ವಾಹನಗಳು ಪಾರ್ಕಿಂಗ್ ಮಾಡುತ್ತಿರುವ ಸ್ಥಳದಲ್ಲಿದ್ದ ಅಶ್ವತ್ಥ ಮರದ ಕೊಂಬೆ ಮುರಿದು ಬಿದ್ದು ಬಿಳಿನೆಲೆ ನಿವಾಸಿ ಹರಿಶ್ಚಂದ್ರ ಎಂಬವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರಿಶ್ಚಂದ್ರ ಅವರು ಕೆಲಸ ಮುಗಿಸಿ ಮನೆಗೆ ತೆರಳಲೆಂದು ಖಾಸಗಿ ವಾಹನ ನಿಲುಗಡೆಯ ಮರದ ಕೆಳಗೆ ವಾಹನಕ್ಕೆ ಕಾದು ನಿಂತಿದ್ದರು . ಇದೇ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದು ಗಾಯಗೊಂಡಿದ್ದಾರೆ. ತಲೆಗೆ ಹಾಗು ಎಡ ಭುಜಕ್ಕೆ ತೀವ್ರಸ್ವರೂಪದ ಗಾಯಗಳಾಗಿದೆ. ಗಾಯಾಳುವನ್ನು ತಕ್ಷಣ ಆಂಬುಲೆನ್ಸ್ ವಾಹನದ ಮೂಲಕ ನಿಟ್ಟೆ ಸದಾನಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮರದ ಬುಡದಲ್ಲಿ ಅನೇಕ ಮಂದಿ ಇದ್ದು ಕೊಂಬೆ ಮುರಿಯುವ ಶಬ್ಧ ಕೇಳಿ ಅವರೆಲ್ಲರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…