ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಬದಿ ಖಾಸಗಿ ವಾಹನಗಳು ಪಾರ್ಕಿಂಗ್ ಮಾಡುತ್ತಿರುವ ಸ್ಥಳದಲ್ಲಿದ್ದ ಅಶ್ವತ್ಥ ಮರದ ಕೊಂಬೆ ಮುರಿದು ಬಿದ್ದು ಬಿಳಿನೆಲೆ ನಿವಾಸಿ ಹರಿಶ್ಚಂದ್ರ ಎಂಬವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರಿಶ್ಚಂದ್ರ ಅವರು ಕೆಲಸ ಮುಗಿಸಿ ಮನೆಗೆ ತೆರಳಲೆಂದು ಖಾಸಗಿ ವಾಹನ ನಿಲುಗಡೆಯ ಮರದ ಕೆಳಗೆ ವಾಹನಕ್ಕೆ ಕಾದು ನಿಂತಿದ್ದರು . ಇದೇ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದು ಗಾಯಗೊಂಡಿದ್ದಾರೆ. ತಲೆಗೆ ಹಾಗು ಎಡ ಭುಜಕ್ಕೆ ತೀವ್ರಸ್ವರೂಪದ ಗಾಯಗಳಾಗಿದೆ. ಗಾಯಾಳುವನ್ನು ತಕ್ಷಣ ಆಂಬುಲೆನ್ಸ್ ವಾಹನದ ಮೂಲಕ ನಿಟ್ಟೆ ಸದಾನಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮರದ ಬುಡದಲ್ಲಿ ಅನೇಕ ಮಂದಿ ಇದ್ದು ಕೊಂಬೆ ಮುರಿಯುವ ಶಬ್ಧ ಕೇಳಿ ಅವರೆಲ್ಲರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…