ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಬದಿ ಖಾಸಗಿ ವಾಹನಗಳು ಪಾರ್ಕಿಂಗ್ ಮಾಡುತ್ತಿರುವ ಸ್ಥಳದಲ್ಲಿದ್ದ ಅಶ್ವತ್ಥ ಮರದ ಕೊಂಬೆ ಮುರಿದು ಬಿದ್ದು ಬಿಳಿನೆಲೆ ನಿವಾಸಿ ಹರಿಶ್ಚಂದ್ರ ಎಂಬವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರಿಶ್ಚಂದ್ರ ಅವರು ಕೆಲಸ ಮುಗಿಸಿ ಮನೆಗೆ ತೆರಳಲೆಂದು ಖಾಸಗಿ ವಾಹನ ನಿಲುಗಡೆಯ ಮರದ ಕೆಳಗೆ ವಾಹನಕ್ಕೆ ಕಾದು ನಿಂತಿದ್ದರು . ಇದೇ ವೇಳೆ ಮರದ ಕೊಂಬೆ ತುಂಡಾಗಿ ಬಿದ್ದು ಗಾಯಗೊಂಡಿದ್ದಾರೆ. ತಲೆಗೆ ಹಾಗು ಎಡ ಭುಜಕ್ಕೆ ತೀವ್ರಸ್ವರೂಪದ ಗಾಯಗಳಾಗಿದೆ. ಗಾಯಾಳುವನ್ನು ತಕ್ಷಣ ಆಂಬುಲೆನ್ಸ್ ವಾಹನದ ಮೂಲಕ ನಿಟ್ಟೆ ಸದಾನಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮರದ ಬುಡದಲ್ಲಿ ಅನೇಕ ಮಂದಿ ಇದ್ದು ಕೊಂಬೆ ಮುರಿಯುವ ಶಬ್ಧ ಕೇಳಿ ಅವರೆಲ್ಲರು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…