Advertisement
MIRROR FOCUS

ಸುಬ್ರಹ್ಮಣ್ಯದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಾಗಾರ

Share

ಸುಬ್ರಹ್ಮಣ್ಯ: ಎಲ್ಲೆಲ್ಲೂ ಮಕ್ಕಳ ಕಲರವ. ಇಂಪಾದ ಸಂಗೀತ ಕೇಳುತ್ತಲೇ ಮೈಮರೆಯುವ ಕ್ಷಣ. ಅದರ ಜೊತೆಗೆ ಸಂಗೀತದ ಬಗ್ಗೆ ಚರ್ಚೆ. ಇಂತಹದ್ದೊಂದು ಸಂದರ್ಭ ಕಂಡದ್ದು ಕುಕ್ಕೆ ಸುಬ್ರಹ್ಮಣ್ಯದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರದಲ್ಲಿ.

Advertisement
Advertisement

ಶ್ರೀ ಸರಸ್ವತೀ ಸಂಗೀತ ಶಾಲೆ ಸುಬ್ರಹ್ಮಣ್ಯ ಇದರ ವತಿಯಿಂದ  ಮೂರು ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರ  ಆದಿಸುಬ್ರಹ್ಮಣ್ಯದಲ್ಲಿ ಉದ್ಘಾಟನೆಗೊಂಡಿತು. ಇತ್ತೀಚೆಗೆ ಸಂಗೀತ ಕ್ಷೇತ್ರದ ಕಡೆಗೆ ಯುವ ಸಮೂಹ ಆಕರ್ಷಣೆಯನ್ನು ಹೊಂದುತ್ತಿದೆ. ಎಳವೆಯಿಂದಲೇ ಮಕ್ಕಳು ಸಂಗೀತ ಕಲಿಯುತ್ತಿದ್ದಾರೆ. ಹೀಗಾಗಿ ಸಂಗೀತದ ಮನಸ್ಸುಗಳು ಈಗ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಬ್ರಹ್ಮಣ್ಯದ ಸಂಗೀತ ಶಾಲೆ .

ಇನ್ನೊಂದು ಕಡೆ ಧರ್ಮಸ್ಥಳ ಬಳಿಯ ನಿಡ್ಲೆ ಸಮೀಪ ಕರುಂಬಿತ್ತಿಲ್ ಎಂಬ ಗ್ರಾಮೀಣ ಭಾಗದಲ್ಲಿ ಸಂಗೀತ ಕ್ಷೇತ್ರದ ದಿಗ್ಗಜರಿಂದ ಸಂಗೀತದ ಬಗ್ಗೆ ಚರ್ಚೆ, ಪ್ರದರ್ಶನವೂ ಇರುತ್ತದೆ. ಇಲ್ಲೂ ಕೂಡಾ ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆಯ ಸಂಗೀತದ ಮನಸ್ಸುಗಳು ಆಗಮಿಸುತ್ತದೆ. ಹೀಗಾಗಿ ಸಂಗೀತ ಕ್ಷೇತ್ರವು ಇಂದು ಮನೆ ಮನೆಗಳಿಗೆ ತಲಪುತ್ತಿದೆ.  ಈ ಸೇವೆಯ ಒಂದು ಅಂಗ ಶ್ರೀ ಸರಸ್ವತೀ ಸಂಗೀತ ಶಾಲೆ. ಸಂಗೀತ ಕ್ಷೇತ್ರದ ಬಗ್ಗೆ ಇನ್ನಷ್ಟು ಅಧ್ಯಯನ ಮಾಡುವ ಕಾರ್ಯಾಗಾರ ಈಗ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದೆ.

 

ಈ ಶಿಬಿರವನ್ನು  ಸುಬ್ರಹ್ಮಣ್ಯದ ಉದ್ಯಮಿ ಹರೀಶ್ ಕಾಮತ್  ಉದ್ಘಾಟಿಸಿ, ” ಸಂಗೀತ ಹಾಗೂ ನೃತ್ಯ ಪ್ರಕಾರಗಳ ಹಲವು ಇವೆ. ಇವುಗಳಲ್ಲಿ ಭಾರತೀಯ ಕರ್ನಾಟಕ ಶಾಸ್ತ್ರೀಯ ಅಳವಡಿಕೆ ಇಂದಿನ ಅಗತ್ಯ. ಸಂಸ್ಕೃತಿ ಉಳಿವಿನಲ್ಲಿ ಸಂಗೀತ ಕಲೆ ಕೊಡುಗೆ ಅಪಾರ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ “ಸಾಹಿತ್ಯ ಕೃಷಿ ಕೆಲಸ ಹೆಚ್ಚಿಸುವ ಕೆಲಸವನ್ನು ಶ್ರೀ ಸರಸ್ವತಿ ಸಂಗೀತ ಶಾಲೆ ನಡೆಸುತ್ತಿದೆ. ಪ್ರಾಚೀನ ಕಾಲದಿಂದಲೂ ಶಾಸ್ತ್ರೀಯ ಕಲೆಗೆ ಒತ್ತು ನೀಡುತ್ತ ಬರಲಾಗಿದೆ. ಇದು ಮುಂದುವರೆಯಲು ಕರ್ನಾಟಕ ಶಾಸ್ತ್ರೀಯ ಕಲಿಕೆಯ ಅವಶ್ಯಕತೆ ಇರುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ವಿದುಷಿ ಕಾಂಚನ ಎಸ್ ಶ್ರುತಿರಂಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಸರಸ್ವತೀ ಸಂಗೀತ ಶಾಲೆ ಶಿಕ್ಷಕಿ ವಿದ್ಯಾಗೋವಿಂದ ಪ್ರಸ್ತಾವನೆಗೈದರು. ವಿಜಯಕುಮಾರ್ ನಡುತೋಟ ಸ್ವಾಗತಿಸಿದರು. ಹರೀಶ್ ಬೆದ್ರಾಜೆ ಸ್ವಾಗತಿಸಿದರು. ಪ್ರವೀಣ್ ಕಲ್ಲೆಂಬಿ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಮತ್ತು ಅವನೀಶ ಪ್ರಾರ್ಥಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

21 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago