Advertisement
MIRROR FOCUS

ಸುಬ್ರಹ್ಮಣ್ಯದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಾಗಾರ

Share

ಸುಬ್ರಹ್ಮಣ್ಯ: ಎಲ್ಲೆಲ್ಲೂ ಮಕ್ಕಳ ಕಲರವ. ಇಂಪಾದ ಸಂಗೀತ ಕೇಳುತ್ತಲೇ ಮೈಮರೆಯುವ ಕ್ಷಣ. ಅದರ ಜೊತೆಗೆ ಸಂಗೀತದ ಬಗ್ಗೆ ಚರ್ಚೆ. ಇಂತಹದ್ದೊಂದು ಸಂದರ್ಭ ಕಂಡದ್ದು ಕುಕ್ಕೆ ಸುಬ್ರಹ್ಮಣ್ಯದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರದಲ್ಲಿ.

ಶ್ರೀ ಸರಸ್ವತೀ ಸಂಗೀತ ಶಾಲೆ ಸುಬ್ರಹ್ಮಣ್ಯ ಇದರ ವತಿಯಿಂದ  ಮೂರು ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರ  ಆದಿಸುಬ್ರಹ್ಮಣ್ಯದಲ್ಲಿ ಉದ್ಘಾಟನೆಗೊಂಡಿತು. ಇತ್ತೀಚೆಗೆ ಸಂಗೀತ ಕ್ಷೇತ್ರದ ಕಡೆಗೆ ಯುವ ಸಮೂಹ ಆಕರ್ಷಣೆಯನ್ನು ಹೊಂದುತ್ತಿದೆ. ಎಳವೆಯಿಂದಲೇ ಮಕ್ಕಳು ಸಂಗೀತ ಕಲಿಯುತ್ತಿದ್ದಾರೆ. ಹೀಗಾಗಿ ಸಂಗೀತದ ಮನಸ್ಸುಗಳು ಈಗ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಬ್ರಹ್ಮಣ್ಯದ ಸಂಗೀತ ಶಾಲೆ .

ಇನ್ನೊಂದು ಕಡೆ ಧರ್ಮಸ್ಥಳ ಬಳಿಯ ನಿಡ್ಲೆ ಸಮೀಪ ಕರುಂಬಿತ್ತಿಲ್ ಎಂಬ ಗ್ರಾಮೀಣ ಭಾಗದಲ್ಲಿ ಸಂಗೀತ ಕ್ಷೇತ್ರದ ದಿಗ್ಗಜರಿಂದ ಸಂಗೀತದ ಬಗ್ಗೆ ಚರ್ಚೆ, ಪ್ರದರ್ಶನವೂ ಇರುತ್ತದೆ. ಇಲ್ಲೂ ಕೂಡಾ ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆಯ ಸಂಗೀತದ ಮನಸ್ಸುಗಳು ಆಗಮಿಸುತ್ತದೆ. ಹೀಗಾಗಿ ಸಂಗೀತ ಕ್ಷೇತ್ರವು ಇಂದು ಮನೆ ಮನೆಗಳಿಗೆ ತಲಪುತ್ತಿದೆ.  ಈ ಸೇವೆಯ ಒಂದು ಅಂಗ ಶ್ರೀ ಸರಸ್ವತೀ ಸಂಗೀತ ಶಾಲೆ. ಸಂಗೀತ ಕ್ಷೇತ್ರದ ಬಗ್ಗೆ ಇನ್ನಷ್ಟು ಅಧ್ಯಯನ ಮಾಡುವ ಕಾರ್ಯಾಗಾರ ಈಗ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದೆ.

 

ಈ ಶಿಬಿರವನ್ನು  ಸುಬ್ರಹ್ಮಣ್ಯದ ಉದ್ಯಮಿ ಹರೀಶ್ ಕಾಮತ್  ಉದ್ಘಾಟಿಸಿ, ” ಸಂಗೀತ ಹಾಗೂ ನೃತ್ಯ ಪ್ರಕಾರಗಳ ಹಲವು ಇವೆ. ಇವುಗಳಲ್ಲಿ ಭಾರತೀಯ ಕರ್ನಾಟಕ ಶಾಸ್ತ್ರೀಯ ಅಳವಡಿಕೆ ಇಂದಿನ ಅಗತ್ಯ. ಸಂಸ್ಕೃತಿ ಉಳಿವಿನಲ್ಲಿ ಸಂಗೀತ ಕಲೆ ಕೊಡುಗೆ ಅಪಾರ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ “ಸಾಹಿತ್ಯ ಕೃಷಿ ಕೆಲಸ ಹೆಚ್ಚಿಸುವ ಕೆಲಸವನ್ನು ಶ್ರೀ ಸರಸ್ವತಿ ಸಂಗೀತ ಶಾಲೆ ನಡೆಸುತ್ತಿದೆ. ಪ್ರಾಚೀನ ಕಾಲದಿಂದಲೂ ಶಾಸ್ತ್ರೀಯ ಕಲೆಗೆ ಒತ್ತು ನೀಡುತ್ತ ಬರಲಾಗಿದೆ. ಇದು ಮುಂದುವರೆಯಲು ಕರ್ನಾಟಕ ಶಾಸ್ತ್ರೀಯ ಕಲಿಕೆಯ ಅವಶ್ಯಕತೆ ಇರುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ವಿದುಷಿ ಕಾಂಚನ ಎಸ್ ಶ್ರುತಿರಂಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಸರಸ್ವತೀ ಸಂಗೀತ ಶಾಲೆ ಶಿಕ್ಷಕಿ ವಿದ್ಯಾಗೋವಿಂದ ಪ್ರಸ್ತಾವನೆಗೈದರು. ವಿಜಯಕುಮಾರ್ ನಡುತೋಟ ಸ್ವಾಗತಿಸಿದರು. ಹರೀಶ್ ಬೆದ್ರಾಜೆ ಸ್ವಾಗತಿಸಿದರು. ಪ್ರವೀಣ್ ಕಲ್ಲೆಂಬಿ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಮತ್ತು ಅವನೀಶ ಪ್ರಾರ್ಥಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

10 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

13 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

13 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

17 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

17 hours ago