Advertisement
MIRROR FOCUS

ಸುಬ್ರಹ್ಮಣ್ಯದಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಾಗಾರ

Share

ಸುಬ್ರಹ್ಮಣ್ಯ: ಎಲ್ಲೆಲ್ಲೂ ಮಕ್ಕಳ ಕಲರವ. ಇಂಪಾದ ಸಂಗೀತ ಕೇಳುತ್ತಲೇ ಮೈಮರೆಯುವ ಕ್ಷಣ. ಅದರ ಜೊತೆಗೆ ಸಂಗೀತದ ಬಗ್ಗೆ ಚರ್ಚೆ. ಇಂತಹದ್ದೊಂದು ಸಂದರ್ಭ ಕಂಡದ್ದು ಕುಕ್ಕೆ ಸುಬ್ರಹ್ಮಣ್ಯದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರದಲ್ಲಿ.

ಶ್ರೀ ಸರಸ್ವತೀ ಸಂಗೀತ ಶಾಲೆ ಸುಬ್ರಹ್ಮಣ್ಯ ಇದರ ವತಿಯಿಂದ  ಮೂರು ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಗಾರ  ಆದಿಸುಬ್ರಹ್ಮಣ್ಯದಲ್ಲಿ ಉದ್ಘಾಟನೆಗೊಂಡಿತು. ಇತ್ತೀಚೆಗೆ ಸಂಗೀತ ಕ್ಷೇತ್ರದ ಕಡೆಗೆ ಯುವ ಸಮೂಹ ಆಕರ್ಷಣೆಯನ್ನು ಹೊಂದುತ್ತಿದೆ. ಎಳವೆಯಿಂದಲೇ ಮಕ್ಕಳು ಸಂಗೀತ ಕಲಿಯುತ್ತಿದ್ದಾರೆ. ಹೀಗಾಗಿ ಸಂಗೀತದ ಮನಸ್ಸುಗಳು ಈಗ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಸುಬ್ರಹ್ಮಣ್ಯದ ಸಂಗೀತ ಶಾಲೆ .

ಇನ್ನೊಂದು ಕಡೆ ಧರ್ಮಸ್ಥಳ ಬಳಿಯ ನಿಡ್ಲೆ ಸಮೀಪ ಕರುಂಬಿತ್ತಿಲ್ ಎಂಬ ಗ್ರಾಮೀಣ ಭಾಗದಲ್ಲಿ ಸಂಗೀತ ಕ್ಷೇತ್ರದ ದಿಗ್ಗಜರಿಂದ ಸಂಗೀತದ ಬಗ್ಗೆ ಚರ್ಚೆ, ಪ್ರದರ್ಶನವೂ ಇರುತ್ತದೆ. ಇಲ್ಲೂ ಕೂಡಾ ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆಯ ಸಂಗೀತದ ಮನಸ್ಸುಗಳು ಆಗಮಿಸುತ್ತದೆ. ಹೀಗಾಗಿ ಸಂಗೀತ ಕ್ಷೇತ್ರವು ಇಂದು ಮನೆ ಮನೆಗಳಿಗೆ ತಲಪುತ್ತಿದೆ.  ಈ ಸೇವೆಯ ಒಂದು ಅಂಗ ಶ್ರೀ ಸರಸ್ವತೀ ಸಂಗೀತ ಶಾಲೆ. ಸಂಗೀತ ಕ್ಷೇತ್ರದ ಬಗ್ಗೆ ಇನ್ನಷ್ಟು ಅಧ್ಯಯನ ಮಾಡುವ ಕಾರ್ಯಾಗಾರ ಈಗ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದೆ.

 

ಈ ಶಿಬಿರವನ್ನು  ಸುಬ್ರಹ್ಮಣ್ಯದ ಉದ್ಯಮಿ ಹರೀಶ್ ಕಾಮತ್  ಉದ್ಘಾಟಿಸಿ, ” ಸಂಗೀತ ಹಾಗೂ ನೃತ್ಯ ಪ್ರಕಾರಗಳ ಹಲವು ಇವೆ. ಇವುಗಳಲ್ಲಿ ಭಾರತೀಯ ಕರ್ನಾಟಕ ಶಾಸ್ತ್ರೀಯ ಅಳವಡಿಕೆ ಇಂದಿನ ಅಗತ್ಯ. ಸಂಸ್ಕೃತಿ ಉಳಿವಿನಲ್ಲಿ ಸಂಗೀತ ಕಲೆ ಕೊಡುಗೆ ಅಪಾರ ಎಂದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ “ಸಾಹಿತ್ಯ ಕೃಷಿ ಕೆಲಸ ಹೆಚ್ಚಿಸುವ ಕೆಲಸವನ್ನು ಶ್ರೀ ಸರಸ್ವತಿ ಸಂಗೀತ ಶಾಲೆ ನಡೆಸುತ್ತಿದೆ. ಪ್ರಾಚೀನ ಕಾಲದಿಂದಲೂ ಶಾಸ್ತ್ರೀಯ ಕಲೆಗೆ ಒತ್ತು ನೀಡುತ್ತ ಬರಲಾಗಿದೆ. ಇದು ಮುಂದುವರೆಯಲು ಕರ್ನಾಟಕ ಶಾಸ್ತ್ರೀಯ ಕಲಿಕೆಯ ಅವಶ್ಯಕತೆ ಇರುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ವಿದುಷಿ ಕಾಂಚನ ಎಸ್ ಶ್ರುತಿರಂಜನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ಸರಸ್ವತೀ ಸಂಗೀತ ಶಾಲೆ ಶಿಕ್ಷಕಿ ವಿದ್ಯಾಗೋವಿಂದ ಪ್ರಸ್ತಾವನೆಗೈದರು. ವಿಜಯಕುಮಾರ್ ನಡುತೋಟ ಸ್ವಾಗತಿಸಿದರು. ಹರೀಶ್ ಬೆದ್ರಾಜೆ ಸ್ವಾಗತಿಸಿದರು. ಪ್ರವೀಣ್ ಕಲ್ಲೆಂಬಿ ಕಾರ್ಯಕ್ರಮ ನಿರೂಪಿಸಿದರು. ಸುಬ್ರಹ್ಮಣ್ಯ ಮತ್ತು ಅವನೀಶ ಪ್ರಾರ್ಥಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

3 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

5 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

5 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

11 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

11 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

14 hours ago