ಸುದ್ದಿಗಳು

ಸುಬ್ರಹ್ಮಣ್ಯದ ಆನೆ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ಮಾಡಿದ ಗ್ರಾ ಪಂ ಸದಸ್ಯ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.

Advertisement
Advertisement

ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು  ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್‍ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

3 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

13 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

14 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

19 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago