ಸುದ್ದಿಗಳು

ಸುಬ್ರಹ್ಮಣ್ಯದ ಆನೆ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ಮಾಡಿದ ಗ್ರಾ ಪಂ ಸದಸ್ಯ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.

Advertisement
Advertisement

ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು  ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್‍ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

46 minutes ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

49 minutes ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

7 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

7 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…

8 hours ago

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

23 hours ago