ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.
ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…