ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.
ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"