ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.
ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…