ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ ಆನೆಗೆ ಅನಾರೋಗ್ಯ ಕಾಡಿದಾಗ ಎಲ್ಲರಿಗೂ ನೋವು. ತಮಗೆ , ತಮ್ಮ ಕುಟುಂಬಕ್ಕೆ ನೋವಾದಷ್ಟೇ ಸಂಕಟವಾಗುತ್ತಿದೆ. ಹೀಗಾಗಿ ಆನೆಯ ಆರೋಗ್ಯ ವಿಚಾರಣೆಗೆ ಭಕ್ತರು ಬಂದರೆ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ನಡೆಸಿದರು.
ಕುಕ್ಕೆ ದೇವಸ್ಥಾನದ ಆನೆ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಆನೆಯ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಕುಕ್ಕೆ ದೇವಸ್ಥಾನದ ಭಕ್ತ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯ ಪ್ರಶಾಂತ್ ಭಟ್ ಮಾಣಿಲ ಗುರುವಾರ ಬೆಳಗ್ಗೆ ದೇಗುಲದ ಹೊರಾಂಗಣದಲ್ಲಿ ಉರುಳು ಸೇವೆ ನಡೆಸಿದರು.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ಮರಿಯಾನೆ ಯಶಸ್ವಿಯನ್ನು ಉದ್ಯಮಿ, ಶಾಸಕ ಆನಂದ ಸಿಂಗ್ ಸೇವಾ ರೂಪದಲ್ಲಿ ನೀಡಿದ್ದರು. ಅಂದಿನಿಂದಲೇ ಭಕ್ತರೆಲ್ಲರಿಗೂ ಯಶಸ್ವಿ ಪ್ರೀತಿಯ ಆನೆಯಾಗಿದೆ. ಆನೆಯ ತುಂಟಾಟ, ನಡೆಯುವ ರೀತಿ ಎಲ್ಲವೂ ಖುಷಿ. ಹೀಗಾಗಿ ಭಕ್ತರೆಲ್ಲರೂ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಆರೋಗ್ಯ ವಿಚಾರಿಸಲು ಆನೆಯ ಅಭಿಮಾನಿಗಳು ಶೆಡ್ನತ್ತ ತೆರಳುತಿದ್ದಾರೆ. ಶೀಘ್ರವೇ ಗುಣಮುಖಗೊಂಡು ಎಂದಿನಂತೆ ಇರುವಂತಾಗಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…