ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…