ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…
ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…
15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್ಗೆ ಸಮಾನವಾದ ಮೀಥೇನ್…
ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…