ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…
ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18 ವರೆಗೆ…