ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…