ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…