ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿ ಆನೆ ವಾಸ್ತವ್ಯವಿರುವ ಇಂಜಾಡಿ ಶೆಡ್ನಲ್ಲಿ ವಿವಿಧ ಪೂಜೆ, ಹೋಮ, ಹವನಗಳು ನಡೆದವು.
ದೇವಸ್ಥಾನದ ಆನೆ ಯಶಸ್ವಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿತ್ತು. ಈ ಹಿನ್ನಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಇತ್ತೀಚೆಗೆ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ ಚಿಂತನೆ ಇರಿಸಿತ್ತು. ಈ ವೇಳೆ ದೈವಜ್ಞರು ಶೆಡ್ನ ವಾಸ್ತು ಸಹಿತ ಕೆಲ ದೋಷಗಳು ಕಂಡು ಬಂದ ಕುರಿತು ತಿಳಿಸಿ ದೋಷ ಪರಿಹಾರಕ್ಕೆ ಕೆಲ ಪರಿಹಾರ ಕ್ರಮಗಳನ್ನು ಸೂಚಿಸಿದ್ದರು. ಅದರಂತೆ ಶೆಡ್ನಲ್ಲಿ ವಾಸ್ತು ಹೋಮ, ವಾಸ್ತುಬಲಿ, ಸುದರ್ಶನ ಹೋಮ, ಮೃತ್ಯುಂಜಯ ಹೋಮ ಇತ್ಯಾದಿಗಳನ್ನು ನಡೆಸಲಾಯಿತು. ದೇವಸ್ಥಾನ ಅರ್ಚಕರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿ ಸದಸ್ಯರು, ದೇಗುಲದ ಅಧಿಕಾರಿ ವರ್ಗದವರು ಸಾರ್ವಜನಿಕರು ಉಪಸ್ಥಿತರಿದ್ದರು. ಆನೆಯು ಚೇತರಿಸಿಕೊಳ್ಳುತ್ತಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…