Advertisement
Categories: Uncategorized

ಸುಬ್ರಹ್ಮಣ್ಯ ಕಾಲೇಜಿನಲ್ಲಿ ಪೋಷಕ-ವಿದ್ಯಾರ್ಥಿಗಳ ಸಮ್ಮಿಲನ

Share

ಸುಬ್ರಹ್ಮಣ್ಯ: ಕೇವಲ ವಿದ್ಯಾಲಯಕ್ಕೆ ಕಳುಹಿಸಿದರೆ ಪೋಷಕರ ಕರ್ತವ್ಯ ಮುಗಿಯುವುದಿಲ್ಲ ಬದಲಾಗಿ ಮಕ್ಕಳ ಬಗ್ಗೆ ನಿರಂತರ ಆಸ್ಥೆ ವಹಿಸಬೇಕು.ಅಲ್ಲದೆ ಮಕ್ಕಳಿಗೆ ಶಿಸ್ತಿನ ಅರಿವು ಸದಾ ಅನುರಣಿತವಾಗುವಂತೆ ಮಾಡಬೇಕು ಹಾಗಾದಾಗ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ  ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕುಕ್ಕೆ ದೇವಳದ ವತಿಯಿಂದ ಕಾಲೇಜಿಗೆ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ನೀಡಲಾಗಿದೆ.ಅಲ್ಲದೆ ಶ್ರೀ ದೇವರ ವರಪ್ರಸಾದದಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಕಾಲೇಜಿನಲ್ಲಿ ನೆರವೇರಲಿದೆ.ಅಲ್ಲದೆ ವಿದ್ಯಾರ್ಥಿಗಳ ವಿದ್ಯಾರ್ಜನೆ ಇನ್ನಷ್ಟು ಆವಶ್ಯಕತೆಗಳನ್ನು ಆಡಳಿತ ಮಂಡಳಿ ಒದಗಿಸಲಿದೆ ಎಂದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್ ಮುಖ್ಯಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್,ಹಿರಿಯ ಉಪನ್ಯಾಸಕರಾದ ಎ.ಆರ್.ಮುಲ್ಲಾ, ಸೋಮಶೇಖರ ನಾಯಕ್, ಜಯಶ್ರೀ.ವಿ.ದಂಬೆಕೋಡಿ, ಮೋಹನ್ ಗೌಡ ಸೇರಿದಂತೆ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ನುಡಿ ಹರೆಯವನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಮಾಗಮ ನೆರವೇರಿತು.ನೂತನವಾಗಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ, ಇಲ್ಲಿನ ಸವಲತ್ತುಗಳ ಬಗ್ಗೆ, ಅಳವಡಿಸಿಕೊಳ್ಳಬೇಕಾದ ಶಿಸ್ತಿನ ಬಗ್ಗೆ ಮಾಹಿತಿ ನೀಡಲಾಯಿತು.

ಉಪನ್ಯಾಸಕ ಮೋಹನ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಪ್ರಸ್ತಾಪಿಸಿದರು.ಉಪನ್ಯಾಸಕಿ ಜ್ಯೋತಿ.ಪಿ.ರೈ ವಂದಿಸಿದರು. ಉಪನ್ಯಾಸಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 hour ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

8 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

1 day ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

1 day ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

1 day ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

1 day ago