Advertisement
Categories: Uncategorized

ಸುಬ್ರಹ್ಮಣ್ಯ ಕಾಲೇಜಿನಲ್ಲಿ ಪೋಷಕ-ವಿದ್ಯಾರ್ಥಿಗಳ ಸಮ್ಮಿಲನ

Share

ಸುಬ್ರಹ್ಮಣ್ಯ: ಕೇವಲ ವಿದ್ಯಾಲಯಕ್ಕೆ ಕಳುಹಿಸಿದರೆ ಪೋಷಕರ ಕರ್ತವ್ಯ ಮುಗಿಯುವುದಿಲ್ಲ ಬದಲಾಗಿ ಮಕ್ಕಳ ಬಗ್ಗೆ ನಿರಂತರ ಆಸ್ಥೆ ವಹಿಸಬೇಕು.ಅಲ್ಲದೆ ಮಕ್ಕಳಿಗೆ ಶಿಸ್ತಿನ ಅರಿವು ಸದಾ ಅನುರಣಿತವಾಗುವಂತೆ ಮಾಡಬೇಕು ಹಾಗಾದಾಗ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಸಂದೇಹವಿಲ್ಲ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಅವರು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ  ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಪೋಷಕರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಕುಕ್ಕೆ ದೇವಳದ ವತಿಯಿಂದ ಕಾಲೇಜಿಗೆ ಅಗತ್ಯವಾದ ಎಲ್ಲಾ ಸವಲತ್ತುಗಳನ್ನು ನೀಡಲಾಗಿದೆ.ಅಲ್ಲದೆ ಶ್ರೀ ದೇವರ ವರಪ್ರಸಾದದಿಂದ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಕಾಲೇಜಿನಲ್ಲಿ ನೆರವೇರಲಿದೆ.ಅಲ್ಲದೆ ವಿದ್ಯಾರ್ಥಿಗಳ ವಿದ್ಯಾರ್ಜನೆ ಇನ್ನಷ್ಟು ಆವಶ್ಯಕತೆಗಳನ್ನು ಆಡಳಿತ ಮಂಡಳಿ ಒದಗಿಸಲಿದೆ ಎಂದರು.
ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೋಕೇಶ್ವರ ಡಿ.ಆರ್ ಮುಖ್ಯಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್,ಹಿರಿಯ ಉಪನ್ಯಾಸಕರಾದ ಎ.ಆರ್.ಮುಲ್ಲಾ, ಸೋಮಶೇಖರ ನಾಯಕ್, ಜಯಶ್ರೀ.ವಿ.ದಂಬೆಕೋಡಿ, ಮೋಹನ್ ಗೌಡ ಸೇರಿದಂತೆ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆ ನುಡಿ ಹರೆಯವನ್ನು ಬಿಡುಗಡೆಗೊಳಿಸಲಾಯಿತು. ಸಮಾರಂಭದಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಮಾಗಮ ನೆರವೇರಿತು.ನೂತನವಾಗಿ ಪ್ರಥಮ ಪಿಯುಸಿಗೆ ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಕಾಲೇಜಿನ ಬಗ್ಗೆ, ಇಲ್ಲಿನ ಸವಲತ್ತುಗಳ ಬಗ್ಗೆ, ಅಳವಡಿಸಿಕೊಳ್ಳಬೇಕಾದ ಶಿಸ್ತಿನ ಬಗ್ಗೆ ಮಾಹಿತಿ ನೀಡಲಾಯಿತು.

ಉಪನ್ಯಾಸಕ ಮೋಹನ ಗೌಡ ಸ್ವಾಗತಿಸಿದರು. ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಪ್ರಸ್ತಾಪಿಸಿದರು.ಉಪನ್ಯಾಸಕಿ ಜ್ಯೋತಿ.ಪಿ.ರೈ ವಂದಿಸಿದರು. ಉಪನ್ಯಾಸಕಿ ಸುಧಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

2 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

8 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

18 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

18 hours ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

1 day ago